Posts

HISTORICAL PLACE

ಹಂಪಿ, ಕಮಲಾಪುರದ ರಾಜ್ಯ ಪುರಾತತ್ವ ಇಲಾಖೆ ಜಿಲ್ಲಾ ಪುರಾತತ್ವ ಸರ್ವೆಕ್ಷಣಾಧಿಕಾರಿ ಭೇಟಿ

Image

ನಿಟ್ಟೂರು ಗ್ರಾಮದಲ್ಲಿ ಅಪಪ್ರಕಟಿತ ಶಾಸನ ಪತ್ತೆ:

Image
            ಸಿರುಗುಪ್ಪ ತಾಲೂಕಿನ ನಿಟ್ಟೂರು ಗ್ರಾಮವು ಐತಿಹಾಸಿಕವಾಗಿ ತುಂಬಾ ಪ್ರಾಮುಖ್ಯತೆಯನ್ನು ಪಡೆದ ಸ್ಥಳವಾಗಿದೆ. ತುಂಗಭದ್ರ ನದಿ ತೀರದ ಪ್ರದೇಶವಾಗಿದ್ದು ಸಾಮ್ರಾಟ ಅಶೋಕನ ಶಿಲಾಶಾಸನಗಳನ್ನು ಒಳಗೊಂಡಿರುವ ಕಾರಣ ಮೌರ್ಯರ ಆಳ್ವಿಕೆಗೆ ಸಂಬಂಧಿಸಿದಂತೆ ಮಹತ್ವಪೂರ್ಣವಾದ ಮಾಹಿತಿಯನ್ನು ನೀಡುತ್ತದೆ. ಪಕ್ಕದಲ್ಲಿಯೇ ಇರುವ ಶುಕ್ರದಪ್ಪನ ಬೆಟ್ಟವು ಸಹ ಇತಿಹಾಸ ಪೂರ್ವ ಕಾಲಘಟ್ಟದ ಆದಿಮಾನವನ ನೆಲೆಯಾಗಿ ಪ್ರಸಿದ್ಧಿಯಾಗಿದೆ. ಈ ಗ್ರಾಮದಿಂದ ತೆಕ್ಕಲಕೋಟೆಗೆ ಸಂಚರಿಸುವಾಗ ಮಾರ್ಗ ಮಧ್ಯದಲ್ಲಿ ಶ್ರೀಯುತ ಅಶೋಕ ಅಬಕಾರಿ ಮತ್ತು ಮನೋಹರ ಸಿಎಂ ರವರು ಕ್ಷೇತ್ರ ಕಾರ್ಯವನ್ನು ಕೈಗೊಂಡಾಗ ಒಂದು ದೊಡ್ಡದಾದ ಬಂಡೆಯ ಮೇಲೆ ಅಕ್ಷರಗಳನ್ನು ಗಮನಿಸಲಾಗಿದ್ದು ನಂತರ ಇದೊಂದು ಅಪ್ರಕಟಿತ ಶಾಸನವೆಂದು ಗುರುತಿಸಲಾಯಿತು.        ಶಾಸನದ ಹೆಚ್ಚಿನ ವಿವರಣೆಗಾಗಿ ಸಂಪರ್ಕಿಸಿದಾಗ ಗಂಗಾವತಿಯ ಶ್ರೀ ಶರಣಬಸಪ್ಪ ಕೋಲ್ಕರ ಅವರ ಮಾರ್ಗದರ್ಶನದಲ್ಲಿ ಶಾಸನದ ಅಧ್ಯಯನವನ್ನ ಶ್ರೀ ಮಾರುತಿ ಭಜಂತ್ರಿ ಲಿಪಿ ತಜ್ಞರು ಅಧ್ಯಯನ ನಡೆಸಿದ್ದಾರೆ ಅವರ ಜೊತೆ ಹಿರೇ ಬೆಣಕಲ್ ನ ಶ್ರೀ ಮಂಜುನಾಥ ದೊಡ್ಡಮನಿ ಅವರು ಜೊತೆಯಾಗಿ ಆಗಮಿಸಿ ಶಾಸನದ ಪಡೆಯಚ್ಚು ತೆಗೆದುಕೊಳ್ಳುವ ಮುಖಾಂತರ ಶಾಸನವು ಮೌರ್ಯರ ಆಳ್ವಿಕೆಯ ನಂತರದ ಅಂದರೆ ಸುಮಾರು ಐದರಿಂದ ಏಳನೇ ಶತಮಾನದ ಮಧ್ಯಭಾಗದ ಕಾಲಘಟ್ಟದಲ್ಲಿ ಬಳಸಿರುವ ಲಿಪಿಯಾಗಿದ್ದು ಯಾವ...

ತೆಕ್ಕಲಕೋಟೆಯ ಆದಿಮ ಪರಿಸರದಲ್ಲಿ‌ ಕೆರೆ ನಿರ್ಮಾಣದ ಶಿಲಾಶಾಸನ ಶೋಧ:

Image
*ತೆಕ್ಕಲಕೋಟೆಯ ಆದಿಮ ಪರಿಸರದಲ್ಲಿ‌ ಏಳು ತಲೆಮಾರುಗಳ ಹೆಸರುಗಳನ್ನು ಒಳಗೊಂಡಿರುವ ಅಪರೂಪದ ಶಾಸನ ಪತ್ತೆ:* ತೆಕ್ಕಲಕೋಟೆಯು ಇತಿಹಾಸ ಪೂರ್ವ ಕಾಲದಿಂದಲೂ ಹಲವಾರು ಐತಿಹಾಸಿಕ ಮಹತ್ವವನ್ನು ಪಡೆದುಕೊಂಡಿದ್ದು ಇತ್ತೀಚೆಗೆ ಉತ್ಖನನದಲ್ಲಿ ಆದಿಮಾನವನ ಅಸ್ಥಿಪಂಜರ ದೊರೆತ ನಂತರ ಮತ್ತಷ್ಟು ಪ್ರಸಿದ್ಧಿಯನ್ನು ಪಡೆದುಕೊಂಡಿತು. ಪ್ರಸ್ತುತ ಉತ್ಖನನಗೊಂಡ ಸ್ಥಳವಾದ ಗೌಡರ ಮೂಲೆ ಸಮೀಪದಲ್ಲಿಯೇ ಸ್ಥಳೀಯ ಇತಿಹಾಸ ಆಸಕ್ತರಾದ ಮನೋಹರ್ ಸಿ.ಎಂ ಹಾಗೂ ಸ್ಥಳೀಯರಾದ ಮೀನ್ಗಿ ನಾಗರಾಜರವರು ಶಾಸನವೊಂದನ್ನು ಪತ್ತೆಹಚ್ಚಿದ್ದಾರೆ.  ಬೃಹತ್ ಬಂಡೆಯೊಂದರ ಮೇಲೆ ಶಾಸನವನ್ನು ಬರೆಯಲಾಗಿದ್ದು  ವ್ಯಕ್ತಿಯೊಬ್ಬ ಕೆರೆಯನ್ನು ನಿರ್ಮಾಣ ಮಾಡಿರುವ ಬಗ್ಗೆ ದಾಖಲೆಯನ್ನು ಒದಗಿಸುತ್ತದೆ.  ಶಾಸನದ ವಿವರ: ಆರು ಸಾಲುಗಳನ್ನು ಒಳಗೊಂಡಿರುವ ಈ ಶಾಸನವು ಕನ್ನಡ ಲಿಪಿಯನ್ನು ಒಳಗೊಂಡಿದ್ದು ಸೂರ್ಯ ಮತ್ತು ಚಂದ್ರನ ಸಂಕೇತದೊಂದಿಗೆ ಆರಂಭವಾಗಿ "ಟೆಕಲಕೊಟೆ ನಾಡಗೌಡ ಯರೆ ತ್ರಿಜಣ ಗೌಡನ ಮಗ ಮಲಣಗೌಡನ ಮಗ ಚಿಣಗೌಡನ ಮಗ ಪ್ರಜಟನ ಮಗ ಗೌಡಪನ ಮಗ ತ್ರಿಚಣ ಚನ್ನವಿರಪ ಗೌಡನು ಕಟಿಸಿದ ಕೆರೆ" ಎಂದು ಬರೆಯಲಾಗಿದೆ. ಲಿಪಿತಜ್ಞರಾದ ಮಾರುತಿ ಭಜಂತ್ರಿರವರ‌‌ ಅಧ್ಯಯನದ ಪ್ರಕಾರ ಶಾಸನದ‌ ಲಿಪಿ‌ ಮತ್ತು ಬರವಣಿಗೆಯ ಭಾಷೆಯನ್ನು ಆಧಾರವನ್ನಾಗಿ ಪರಿಗಣಿಸಿ ವಿಜಯನಗರ ಮತ್ತು ವಿಜಯನಗರೋತ್ತರ  (೧೭ ರಿಂದ ೧೮ ನೇ ಶತಮಾನ) ಕಾಲಘಟ್ಟದಲ್ಲಿ ಬರೆಸಿರಬಹುದು ಎಂದು ಅಭಿಪ್ರಾಯ ನೀಡಿದ್ದಾ...

ತುಮಟಿ ಗ್ರಾಮದಲ್ಲಿ ಅಪರೂಪದ ಹಂದಿಬೇಟೆ ವೀರಗಲ್ಲು ಶೋಧ....

Image
       ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ‘ತುಮಟಿ’ ಗ್ರಾಮದಲ್ಲಿ ಇತ್ತೀಚೆಗೆ ಕೈಗೊಂಡ ಕ್ಷೇತ್ರಕಾರ್ಯದ ಸಂದರ್ಭದಲ್ಲಿ ಅಪ್ರಕಟಿತ ಹಂದಿಬೇಟೆ ವೀರಗಲ್ಲನ್ನು ಪತ್ತೆಹಚ್ಚಲಾಯಿತು. ತುಮಟಿ ಗ್ರಾಮದ ದುಗ್ಲಾದೇವಿ ಕಟ್ಟೆಯ ಮೇಲೆ ಇರಿಸಿರುವ ಹಂದಿ ಬೇಟೆ ವೀರಗಲ್ಲು ಸುಂದರ ಕೆತ್ತನೆಯಿಂದ ಕೂಡಿದೆ. ಒಂದೇ ಹಂತದಲ್ಲಿ ಪ್ರಧಾನವಾಗಿ ಕಂಡರಿಸಿರುವ ವೀರಗಲ್ಲಿನ ಬಲ ಭಾಗದಲ್ಲಿ ಕುದುರೆಯ ಮೇಲೆ ಕುಳಿತು ಹಂದಿಬೇಟೆಯಲ್ಲಿ ತೊಡಗಿರುವ ವೀರನ ಚಿತ್ರಣವಿದೆ. ಅಲಂಕಾರಿಕ ಪ್ರಭಾವಳಿಯಿಂದ ಕೂಡಿದ ವೀರಗಲ್ಲಿನಲ್ಲಿ ಶಸ್ತ್ರಧಾರಿಯಾದ ವೀರನ ಶಿರದ ಭಾಗವು ತ್ರುಟಿತವಾಗಿದ್ದು, ಸೊಂಟದಲ್ಲಿ ಬಾಕು, ಎಡ ಕೈಯಲ್ಲಿ ಕುದುರೆಯ ಲಗಾಮು ಹಿಡಿದಿದ್ದು, ಬಲ ಕೈಯಲ್ಲಿ ಈಟಿಯನ್ನು ಹಿಡಿದು ಹಂದಿ ಬೇಟೆಗೆ ಯತ್ನಿಸಿರುವಂತೆ ಚಿತ್ರಿಸಲಾಗಿದೆ. ಶಿಲ್ಪಿಯು ವೀರ ಮತ್ತು ಕುದುರೆಯನ್ನು ಪ್ರಧಾನವಾಗಿ ಚಿತ್ರಿಸಿರುವನು. ಕುದುರೆಯು ಸುಂದರವಾದ ಮುಖ ಮತ್ತು ದಷ್ಟಪುಷ್ಟವಾದ ಮೈಕಟ್ಟುನ್ನು ಹೊಂದಿದ್ದು, ಬೆನ್ನಿನ ಮೇಲೆ ಜೀನಿ, ಪಟ್ಟಿಗಳಿಂದ ಅಲಂಕಾರಗೊಳಿಸಲಾಗಿದೆ. ಹಾಗೂ ಮುಂದಿನ ಎರಡು ಕಾಲುಗಳನ್ನು ಮೇಲಕ್ಕೆ ಎತ್ತರಿಸಿದ್ದು, ಹಿಂದಿನ ಕಾಲುಗಳು ನೆಲದ ಮೇಲೆ ಇರಿಸಲಾಗಿದೆ. ಪೃಷ್ಠದ ಭಾಗದಲ್ಲಿ ಉದ್ದನೆಯ ಕೂದಲಿರುವ ಬಾಲದ ಚಿತ್ರಣವನ್ನು ಶಿಲ್ಪಿಯು ಸೊಗಸಾಗಿ ಮೂಡಿಸಿದ್ದಾನೆ. ಪ್ರಾಯಶಃ ವೀರನು  ಬೇಟೆಯ ಸಂದರ್ಭದಲ್ಲಿ ಮರಣವನ್ನು ಹೊಂದಿದ್ದು, ಅದನ್ನು ಸ...

ಮುದುಗಲ್ ಕೋಟೆಯತ್ತ ಒಂದು ಚಿತ್ತ

Image
  ಮುದುಗಲ್ಲ ಕೋಟೆ:            ರಾ ಯಚೂರು ಜಿಲ್ಲೆಯ ಮಸ್ಕಿಯಿಂದ ಸುಮಾರು 28 ಕಿ.ಮೀ ಅಂತರದಲ್ಲಿ ಮುದುಗಲ್ಲ ಎಂಬ ಪಟ್ಟಣವಿದೆ. ಪಟ್ಟದಲ್ಲಿನ ಪ್ರಮುಖ ಐತಿಹಾಸಿಕ ಹೆಜ್ಹೆಗುರುತೆಂದರೆ ಅದುವೇ ಬೃಹತ್ ಕೋಟೆ. ಕೋಟೆಯು ತುಂಬಾ ವಿಶಾಲವಾಗಿದ್ದು ಊರು ಸಮೀಪಿಸುತ್ತಲೇ ಕಣ್ಮನಸೆಳೆಯುವಂತಹ ಮನಮೋಹಕ ದೃಶ್ಯವು ಗೋಚರಿಸುತ್ತದೆ. ಅಂತಹ ದೃಶ್ಯ ಮತ್ತೇನಲ್ಲಾ ಅದುವೇ ಕಡುಗಲ್ಲುಗಳ ಮೇಲೆ ಸುಂದರವಾಗಿ ನಿರ್ಮಿಸಿದ ಕೋಟೆಯ ಶೈಲಿ. ಪದ್ಮಾವತ್ ಚಲನಚಿತ್ರ ನೋಡುವಾಗ ಕೋಟೆಯ ಚಿತ್ರಣಗಳು ಹೇಗಿದ್ದವೋ ಹಾಗೇ ನೋಡನೋಡುತ್ತಲೇ ಎಲ್ಲೋ ಒಂದೆಡೆ ಖುಷಿ ಅಂತೆಯೇ ಇದೆಯಲ್ಲವೆಂದು. ಕುತೂಹಲ ಹೆಚ್ಚಿತು ಹೇಗಾದರೂ ಸವಿಯಲೇಬೇಕೆಂದು ಕೋಟೆಯ ಬಳಿ ಹೋದೆವು. ಅಂದ ಹಾಗೇ ಹೇಳೋದು ಬಿಟ್ಟೆ ನನ್ನ ಜೊತೆ ಸ್ನೇಹಿತ ಚನ್ನಬಸವ ಅವರು ಕೂಡಾ ಬಂದಿದ್ದರು. ಆಯ್ತು ಈಗ ನಾವು ಕೋಟೆಯ ಬಳಿ ಬರುತ್ತಿದ್ದಂತೆಯೇ ಸುತ್ತಲೂ ಜಲದುರ್ಗವನ್ನ ಒಳಗೊಂಡಿರುವುದು ಇನ್ನೂ ಕುತೂಹಲವನ್ನ ಕೆರಳಿಸಿತು ಆದರೆ ಇಲ್ಲಿ ಬೇಸರದ ವಿಷಯವೇನೆಂದರೆ ಆ ಜಲವು ಸಂಪೂರ್ಣ ಚರಂಡಿ ಮತ್ತು ತ್ಯಾಜ್ಯ ನೀರಿನಂದಲೇ ಕೂಡಿತ್ತು. ಇರ್ಲಿ ಈಗ ಇವೆಲ್ಲಾ ಹೇಳ್ತಾ ಹೋದ್ರೆ ಪ್ರತಿಯೊಂದು ಊರಲ್ಲಿ ಇದೇ ತರನೇ ಇರ್ತವೆ. ಸರಿ ಮುಂದೆ ಪ್ರವೇಶ ದ್ವಾರದ ಬಳಿ ನಿಂತುಕೊಂಡು ನೋಡ್ತಿರುವಾಗ  ತುಂಬಾ ರೋಮಾಂಚನ ಅನುಭವ. ಆ ಶೈಲಿ, ಕಲ್ಲುಗಳ ಬಳಕೆ ಇವೆಲ್ಲಾ ಆಗಿನ ದಿನಗಳನ್ನ ನೆನಪಿಸುವಂತಿದ್ದವು. ನಿಧಾನಕ್...